Bhagwant Khuba

2024 Activities

ಭಾಲ್ಕಿ ತಾಲೂಕಿನ ಭಾತಂಬ್ರಾದಲ್ಲಿ ಜರುಗಿದ “ವಿಕಸಿತ ಭಾರತ ಸಂಕಲ್ಪ ಯಾತ್ರೆ” ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ಭಗವಾನ್ ಜಗನ್ನಾಥ, ದೇವಿ ಸುಭದ್ರ ಮತ್ತು ಭಗವಾನ್ ಬಲಭದ್ರನ ಆಶೀರ್ವಾದದೊಂದಿಗೆ ಹಬ್ಬ ಆಚರಿಸುವ ಸಮಯ. ಸಾವಿರಾರು ಭಕ್ತರು ಇಂದು ಭಾಗವಹಿಸಿದ್ದ ಶ್ರೀ ಜಗನ್ನಾಥ ರಥ ಯಾತ್ರೆಯ ಮೂರ್ತಿ ಸ್ಥಾಪನಾ ಮಹೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶಿನಾಶೀರ್ವಾದ ಪಡೆದೆನು.
ಬೀದರ್ ಜಿಲ್ಲೆಯ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ ಆಚರಿಸುತ್ತಿರುವ ಈ ಯಾತ್ರೆಯು ಎಲ್ಲರಿಗೂ ಸಂತೋಷ, ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ
ನಮ್ಮ ಬೀದರ್ ಲೋಕಸಭಾ ಕ್ಷೇತ್ರದ ಕಮಲನಗರದಲ್ಲಿ ಜರುಗಿದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿದೆ.
ಇದೇ ಸಂದರ್ಭದಲ್ಲಿ ಉಜ್ವಲಾ ಯೋಜನೆ, ಪಿ.ಎಂ.ಜೆ.ಜೆ.ಬಿ.ವೈ. ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ಮತ್ತು ಸಹಾಯಧನ ವಿತರಣೆ ಮಾಡಲಾಯಿತು.
ಧೂಮಸಾಪೂರ ಹಾಗೂ ಎಸ್. ಎಮ್. ಕೃಷ್ಣ ನಗರ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಹನುಮಾನ್ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ಮುಖಂಡರಾದ ಶ್ರೀ ಸಂತೋಷ್ ಪಾಟೀಲ್ ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಶುಭ ಕೋರಿದೆನು.
ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇಂದು ಬೀದರ್ ಲೋಕಸಭಾ ಕ್ಷೇತ್ರದ ಠಾಣಾಕುಶ್ನೂರ ಗ್ರಾಮದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದೆನು.
ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಮುಖಂಡರು ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಹಲವರು ಯೋಜನೆಗಳ ಬಗ್ಗೆ ವಿವರವಾದ ಸಾರ್ವಜನಿಕರಿಗೆ ಮಾಹಿತಿ ನೀಡಿದರು
ದೇಶದಾದ್ಯಂತ ಜನರ ವಿಶ್ವಾಸವಿರುವುದು “ಮೋದಿ ಜೀ ಅವರ ಗ್ಯಾರಂಟಿ ಮೇಲೆ ಮಾತ್ರ”
ಏಕಂಬದಲ್ಲಿ ಇಂದು ಸಾಯಂಕಾಲ ಜರುಗಿದ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಯಲ್ಲಿ ಪಾಲ್ಗೊಂಡು ನಮ್ಮ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮತ್ತು ದೇಶದಾದ್ಯಂತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ತಿಳಿಸಲಾಯಿತು.
ಯಾತ್ರೆಯ ಯಶಸ್ಸಿಗೆ ಕಾರಣರಾದ ಎಲ್ಲ ಮುಖಂಡರುಗಳಿಗೆ, ಕಾರ್ಯಕರ್ತ ಮಿತ್ರರಿಗೆ ಹಾಗೂ ಗ್ರಾಮಸ್ತರಿಗೆ ಧನ್ಯವಾದಗಳು.
ಬನ್ನಿ, ವಿಶ್ವ ನಾಯಕನ ಕನಸಿಗೆ ಕೈ ಜೋಡಿಸೋಣ, ವಿಕಸಿತ ಭಾರತ ನಿರ್ಮಿಸುವತ್ತ ನಾವೆಲ್ಲ ಪಣ ತೊಡೋಣ.
ಚಿಂತಾಕಿಯಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಅಭಿಯಾನಯಲ್ಲಿ ಭಾಗವಹಿಸಲಾಯಿತು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನೋಪಯೋಗಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ನಿಟ್ಟಿನಲ್ಲಿ ಭಾರತದಾದ್ಯಂತ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಭಾಗವಾಗಿ ಇಂದು ಅಧಿಕಾರಿಗಳು ಚಿಂತಾಕಿ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಡಿ.ಸಿ.ಸಿ ಬ್ಯಾಂಕಿನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಶ್ರೀ ಉಮಾಕಾಂತ ನಾಗಮಾರಪಳ್ಳಿ ಅವರು ಉಪಸ್ಥಿತರಿದ್ದು ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಮಾತ್ರ DBT ಮೂಲಕ ಜನಪರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲೂ ಸಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುತ್ತಿದೆ ಎಂದು ತಿಳಿಸಿದರು.